NEWS

ರೈತರಿಗಾಗಿ 2 ದಿನ ಉಪವಾಸ ಕುಳಿತ ಅಣ್ಣಾಮಲೈ, ಇಲ್ಲಿದೆ ಕಾರಣ

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಗುರುವಾರ ಕರ್ನಾಟಕ ರಾಜ್ಯ ಸರ್ಕಾರವು ನಿರ್ಮಾಣ ಮಾಡಲು ಸಿದ್ದವಾಗಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ( dam at Mekedatu,) ವಿಷಯಕ್ಕೆ ಸಂಬಂಧಿಸಿದಂತೆ ತಂಜಾವೂರು ಜಿಲ್ಲೆಯಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಮೇಕೆದಾಟುದಾಟು ಅಣೆಕಟ್ಟು ನಿರ್ಮಿಸಲು ಪ್ರಯತ್ನಿಸುತ್ತಿರುವ ಕರ್ನಾಟಕ (karnatakat) ಸರ್ಕಾರದ ವಿರುದ್ಧ ಪ್ರತಿಭಟಿಸಲು ತಂಜಾವೂರು ಜುಪಿಟರ್ ಥಿಯೇಟರ್ – ಪಾನಗಲ್ ಕಟ್ಟಡದ ಬಳಿ ಬಿಜೆಪಿ ಪರವಾಗಿ ಉಪವಾಸವನ್ನು ಅಣ್ಣಾಮಲೈ ನಡೆಸುತ್ತಿದ್ದಾರೆ.

ಇದೇ ವೇಳೆ ಅಣ್ಣಾಮಲೈ ಅವರ ಉಪವಾಸ ಪ್ರತಿಭಟನೆಯನ್ನು ಉಲ್ಲೇಖಿಸಿ ಮಾತನಾಡಿರುವ ಕಮಲ್ ಹಾಸನ್ ಅವರು ‘ಭಾರತೀಯ ಸಿನೆಮಾದಲ್ಲಿ ಡಬಲ್ ಆಕ್ಷನ್ ಪಾತ್ರಗಳಲ್ಲಿ ನಟಿಸುವುದನ್ನು ನೋಡಿದ ವೇಳೆಯಲ್ಲಿ ‘ಡಬಲ್ ಆಕ್ಟ್’ ಯಾರು ಮಾಡುತ್ತಿದ್ದಾರೆ ಎನ್ನುವುದನ್ನು ಸುಲಭವಾಗಿ ಗುರುತಿಸಬಹುದು ಅಂತ ಹೇಳಿದ್ದಾರೆ.

ಬಿಜೆಪಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ತಮಿಳುನಾಡು ಬಿಜೆಪಿ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್, ಮಾಜಿ ರಾಜ್ಯ ಅಧ್ಯಕ್ಷ ಸಿ.ಪಿ.ರಾಧಾಕೃಷ್ಣನ್, ಅಖಿಲ ಭಾರತ ಬಿಜೆಪಿ ಮಾಜಿ ಕಾರ್ಯದರ್ಶಿ ಎಚ್.ರಾಜಾ ಮತ್ತು ತಮಿಳುನಾಡು ವಿಧಾನಸಭಾ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಸೇರಿದಂತೆ ಪ್ರಮುಖವ್ಯಕ್ತಿಗಳು ಭಾಗವಹಿಸಿದ್ದರು. ರೈತರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದಾರೆ. ಇಂದು ಸಂಜೆ 5 ರವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಘೋಷಿಸಲಾಗಿದೆ.

ಮೇಕೆದಾಟು ಪರಿಸರದಲ್ಲಿ ಜಲಾಶಯ ನಿರ್ಮಾಣ ಮಾಡಿ, ಅಂದಾಜು 65-66 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸಬೇಕು ಎಂಬುದು ರಾಜ್ಯದ ಉದ್ದೇಶ. ಅಲ್ಲದೆ ಬೃಹತ್‌ ಪ್ರಮಾಣದ ವಿದ್ಯುತ್‌ ಉತ್ಪಾದನೆಗೂ ರಾಜ್ಯ ಸರ್ಕಾರ ಯೋಜನೆ ಹಾಕಿಕೊಂಡಿದೆ

ಪ್ರಸ್ತುತ ಬೆಂಗಳೂರು ನಗರಕ್ಕೆ 1,350 ಮಿಲಿಯನ್‌ ಲೀಟರ್‌ ಕಾವೇರಿ ನೀರನ್ನು ಪೂರೈಸಲಾಗುತ್ತಿದೆ. 2030ರ ವೇಳೆಗೆ 2285 ಮಿಲಿಯನ್‌ ಲೀಟರ್‌ ನೀರು ಬೇಕಾಗುತ್ತದೆ. ಮೇಕೆದಾಟುವಿನಿಂದ 2030ರ ವೇಳೆಗೆ ಬೇಕಾಗುವಷ್ಟುಪ್ರಮಾಣದ ನೀರನ್ನು ಬೆಂಗಳೂರು ನಗರ ಹಾಗೂ ಬಯಲುಸೀಮೆ ಜಿಲ್ಲೆಗಳಿಗೆ ಪೂರೈಸಿ ಸಮಸ್ಯೆ ಬಗೆಹರಿಸುವುದು. ತಮಿಳುನಾಡಿಗೆ ಅದರ ಪಾಲಿನ 177 ಟಿಎಂಸಿ ನೀರನ್ನು ನೀಡಿ, ಬಾಕಿ ಸಮುದ್ರಕ್ಕೆ ಹೋಗಿ ವ್ಯರ್ಥವಾಗುವ ನೀರನ್ನು ಮೇಕೆದಾಟುವಿನಲ್ಲಿ ಸಂಗ್ರಹಿಸಬಹುದು ಎಂಬುದು ರಾಜ್ಯ ಸರ್ಕಾರದ ಲೆಕ್ಕಾಚಾರವಾಗಿದೆ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕೊಲ್ಲೂರು ಮೂಕಾಂಬಿಕೆ ದೇವಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳದ ವಿದ್ಯೆ ಆರೋಗ್ಯ ವ್ಯಾಪಾರ ಭೂಮಿ ವಿಚಾರ ಹಣಕಾಸು ವಿದೇಶಿ ಪ್ರಯಾಣ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹ

ಶಾಶ್ವತ ಪರಿಹಾರ ಶತಸಿದ್ಧ ( ಪರಿಹಾರದಲ್ಲಿ .9008993001

Related Articles

Leave a Reply

Your email address will not be published. Required fields are marked *

Back to top button