ಮುರಿದುಬೀಳುತ್ತಾ ಪ್ರಿಯಾಮಣಿ ‘ಮುಸ್ತಫಾ’ ಜೊತೆಗಿನ ಮದುವೆ? ನ್ಯಾಯಾಲಯದ ಮೆಟ್ಟಿಲೇರಿದ ಪ್ರಕರಣ…
ಪಂಚಭಾಷಾ ತಾರೆ ಪ್ರಿಯಾಮಣಿ ಹಾಗೂ ಮುಸ್ತಫಾ ರಾಜ್ ಅವರ ಮದುವೆ ವಿಚಾರವೀಗ ಕೊರ್ಟ್ ಮೆಟ್ಟಿಲೇರಿದೆ. ಇಬ್ಬರ ಮದುವೆಯನ್ನು ಪ್ರಶ್ನಿಸಿ ಮುಸ್ತಫಾ ರಾಜ್ ಮೊದಲ ಪತ್ನಿ ಆಯೇಷಾ ಇದೀಗ ಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಮುಸ್ತಾಫಾ ರಾಜ್ ಇಲ್ಲಿಯವರೆಗೂ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದಿಲ್ಲ ಎಂದಿರುವ ಆಯೇಷಾ, ಅವರಿಬ್ಬರ ಮದುವೆ ಅಮಾನ್ಯ ಎಂದು ಆರೋಪಿಸಿದ್ದಾರೆ.
ಅಂದಹಾಗೆ ಮುಸ್ತಫಾ ರಾಜ್ ಮತ್ತು ಮೊದಲ ಪತ್ನಿ ಆಯೇಷಾ 2013ರಲ್ಲಿ ಬೇರೆಯಾಗಿದ್ದಾರೆ. ನಂತರ ಮುಸ್ತಫಾ ಅವರು 2017ರಲ್ಲಿ ಪ್ರಿಯಾಮಣಿಯನ್ನು ಮದುವೆ ಆದರು. ಆಯೇಷಾಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೆ, ಮುಸ್ತಫಾ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದಾರೆ. ಆರೋಪದ ಬಗ್ಗೆ ಸ್ಪಷ್ಟನೆ ನೀಡಿರುವ ಮುಸ್ತಫಾ, ನನ್ನ ವಿರುದ್ಧ ಕೇಳಿಬಂದಿರುವ ಆರೋಪ ಸತ್ಯಕ್ಕೆ ದೂರವಾದದ್ದು. ನಾನು ನಿರಂತರವಾಗಿ ಆಯೇಷಾ ಮತ್ತು ಮಕ್ಕಳಿಗೆ ಪರಿಹಾರ ಹಣವನ್ನು ನೀಡುತ್ತಾ ಬರುತ್ತಿದ್ದೇನೆ. ನನ್ನಿಂದ ಹಣ ದೋಚಲು ಆಯೇಷಾ ಮಾಡುತ್ತಿರುವ ಕೃತ್ಯವಿದು ಎಂದು ಮೊದಲ ಪತ್ನಿಯ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.
ಅಂದಹಾಗೆ ಮುಸ್ತಫಾ ರಾಜ್ ಮತ್ತು ಮೊದಲ ಪತ್ನಿ ಆಯೇಷಾ 2013ರಲ್ಲಿ ಬೇರೆಯಾಗಿದ್ದಾರೆ. ನಂತರ ಮುಸ್ತಫಾ ಅವರು 2017ರಲ್ಲಿ ಪ್ರಿಯಾಮಣಿಯನ್ನು ಮದುವೆ ಆದರು. ಆಯೇಷಾಗೆ ಇಬ್ಬರು ಮಕ್ಕಳಿದ್ದಾರೆ. ಅಲ್ಲದೆ, ಮುಸ್ತಫಾ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದಾರೆ. ಆರೋಪದ ಬಗ್ಗೆ ಸ್ಪಷ್ಟನೆ ನೀಡಿರುವ ಮುಸ್ತಫಾ, ನನ್ನ ವಿರುದ್ಧ ಕೇಳಿಬಂದಿರುವ ಆರೋಪ ಸತ್ಯಕ್ಕೆ ದೂರವಾದದ್ದು. ನಾನು ನಿರಂತರವಾಗಿ ಆಯೇಷಾ ಮತ್ತು ಮಕ್ಕಳಿಗೆ ಪರಿಹಾರ ಹಣವನ್ನು ನೀಡುತ್ತಾ ಬರುತ್ತಿದ್ದೇನೆ. ನನ್ನಿಂದ ಹಣ ದೋಚಲು ಆಯೇಷಾ ಮಾಡುತ್ತಿರುವ ಕೃತ್ಯವಿದು ಎಂದು ಮೊದಲ ಪತ್ನಿಯ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ.
ನಾವಿಬ್ಬರು 2010ರಲ್ಲೇ ಬೇರೆಯಾಗಿದ್ದೇವೆ ಮತ್ತು 2013ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದೇವೆ. ನನ್ನ ಮತ್ತು ಪ್ರಿಯಾಮಣಿ ನಡುವಿನ ಮದುವೆ 2017ರಲ್ಲಿ ನಡೆದಿದೆ. ಅಲ್ಲಿಯವರೆಗೂ ಆಯೇಷಾ ಯಾಕೆ ಸುಮ್ಮನಾಗಿದ್ದರು ಎಂದು ಮುಸ್ತಫಾ ಮರಳಿ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಆಯೇಷಾ, ಮುಸ್ತಫಾ ಈಗಲೂ ನನ್ನ ಪತಿಯೇ. ನಮ್ಮ ಮದುವೆ ಸಂಬಂಧ ಇನ್ನು ಮುರಿದಿಲ್ಲ. ಆದರೆ, ಪ್ರಿಯಾಮಣಿ ಮತ್ತು ಮುಸ್ತಫಾ ಮದುವೆ ಅಸಿಂಧುವಾಗಿದೆ. ನಾವು ಇಲ್ಲಿಯವರೆಗೂ ಕೂಡ ವಿಚ್ಛೇದನ ಪಡೆಯಲು ಯಾವುದೇ ಅರ್ಜಿಯನ್ನು ಸಲ್ಲಿಸಿಲ್ಲ. ಪ್ರಿಯಾಮಣಿ ಜತೆಯಲ್ಲಿ ಮದುವೆ ಆಗಬೇಕಾದರೆ ತಾನೊಬ್ಬ ಬ್ಯಾಚುಲರ್ ಎಂದು ನ್ಯಾಯಲಯಕ್ಕೆ ಸುಳ್ಳು ಹೇಳಿ ಮದುವೆ ಆಗಿದ್ದಾರೆಂದು ಆಯೇಷಾ ಸ್ಪಷ್ಟನೆ ನೀಡಿದ್ದಾರೆ.
ಪ್ರಿಯಾಮಣಿ ಜತೆ ಮದುವೆ ಆಗುವವರೆಗೂ ಸುಮ್ಮನಿದ್ದಿದ್ದೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಆಯೇಷಾ, ಇಬ್ಬರು ಮಕ್ಕಳ ತಾಯಿಯಾಗಿ ನೀವು ಏನು ಮಾಡಬಹುದು? ವಿವಾದವನ್ನು ಒಬ್ಬರು ಸೌಹಾರ್ದಯುತವಾಗಿ ವಿಂಗಡಿಸಲು ಪ್ರಯತ್ನಿಸುತ್ತಾರೆ. ಆದರೆ ಅದು ಕಾರ್ಯರೂಪಕ್ಕೆ ಬಾರದಿದ್ದಾಗ ಮಾತ್ರ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
ಏಕೆಂದರೆ ಅವರೀಗ ನನ್ನ ವಿರುದ್ಧ ಬಳಸುತ್ತಿರುವ ಸಮಯವನ್ನು ಕಳೆದುಕೊಳ್ಳಲು ಬಯಸುವುದಿಲ್ಲ ಎಂದು ಆಯೇಷಾ ಹೇಳಿದ್ದಾರೆ. ಪ್ರಿಯಾಮಣಿ ಸಿನಿಮಾ ವಿಚಾರಕ್ಕೆ ಬರುವುದಾದರೆ, ಮದುವೆ ನಂತರ ಸಿನಿಮಾದಿಂದ ಅಂತರ ಕಾಯ್ದುಕೊಂಡಿದ್ದ ಪ್ರಿಯಾಮಣಿ ಇದೀಗ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಈಗಾಗಲೇ ಮನೋಜ್ ಬಾಜ್ಪಾಯಿ ನಟನೆಯ ದಿ ಫ್ಯಾಮಿಲಿ ಮ್ಯಾನ್ ಚಿತ್ರದಲ್ಲಿ ನಟಿಸಿದ್ದಾರೆ. ಮುಂದಿನ ಚಿತ್ರದಲ್ಲಿ ಅಜಯ್ ದೇವಗನ್ ಅಭಿನಯದ ಮೈದಾನ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಪತಿ ಜೊತೆಗಿನ ಫೋಟೋ ಶೇರ್ ಮಾಡಿ ವಿವಾದಗಳಿಗೆ ತೆರೆ ಎಳೆಯಲು ಮುಂದಾದ ಪ್ರಿಯಾಮಣಿ…
ಪ್ರಿಯಾಮಣಿ ಮತ್ತು ಅವರ ಪತಿ ಮುಸ್ತಫಾ ರಾಜ್ ನಡುವೆ ಬಿರುಕುಗಳಿವೆ ಎಂಬ ಸುದ್ದಿ ಕೇಳಿ ಬಂದಿತ್ತು. ಅವರು ಸ್ವಲ್ಪ ಸಮಯದವರೆಗೆ ಅಮೆರಿಕದಲ್ಲಿ ವಾಸಿಸುತ್ತಿದ್ದರು. ಈಗ ನಟಿ ಎಲ್ಲ ವದಂತಿಗೂ ಬ್ರೇಕ್ ಹಾಕಿದ್ದಾರೆ.
ಮುಸ್ತಫಾ ರಾಜ್ನ ಮೊದಲ ಪತ್ನಿ ತಾನು ಮತ್ತು ಮುಸ್ತಫಾ ಕಾನೂನುಬದ್ಧವಾಗಿ ವಿಚ್ಛೇದನ ಪಡೆದಿಲ್ಲ ಎಂದು ಹೇಳಿಕೊಂಡಿದ್ದರು. ಮುಸ್ತಫಾ ರಾಜ್ ತನ್ನ ಬಳಿಗೆ ಹಿಂತಿರುಗುವುದಾಗಿಯೂ ಹೇಳಿದ್ದರು. ಆದರೆ ಈಗ ಎಲ್ಲ ವದಂತಿಗಳು ನೆಲ ಕಚ್ಚಿವೆ. ದೀಪಾವಳಿಯ ಸಂದರ್ಭದಲ್ಲಿ, ಪ್ರಿಯಾಮಣಿ ತನ್ನ ಪತಿಯ ಹೊಸ ಫೊಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಅವರು ತಮ್ಮ ಪತಿ ಮುಸ್ತೂಫಾ ರಾಜ್ ಅವರೊಂದಿಗೆ ತೆಗೆದ ಫೋಟೋ ಜೊತೆ ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ತಿಳಿಸಿದ್ದಾರೆ.
ಪತಿಯಿಂದ ಬೇರೆಯಾಗುವ ವದಂತಿಗಳಿಗೆ ಪ್ರಿಯಾಮಣಿ ತೆರೆ ಎಳೆದಿದ್ದಾರೆ. ಪ್ರಿಯಾಮಣಿ ಇತ್ತೀಚೆಗೆ ಹಿಂದಿ ವೆಬ್ ಡ್ರಾಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ.ಅವರು ಇತ್ತೀಚೆಗೆ ವೆಂಕಟೇಶ್ ಅವರ ‘ನಾರಪ್ಪ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನಟಿಯ ಮುಂದಿನ ತೆಲುಗು ಸಿನಿಮಾ ಬಿಡುಗಡೆಯಾಗಲಿದೆ. ರಾಣಾ ಮತ್ತು ಸಾಯಿ ಪಲ್ಲವಿಯ ‘ವಿರಾಟ ಪರ್ವಂ’ ನಲ್ಲಿ ಪ್ರಿಯಾಮಣಿ ನಟಿಸಿದ್ದಾರೆ. ಪ್ರಿಯಾಮಣಿ ಫ್ಯಾಮಿಲಿ ಮ್ಯಾನ್ ಸಿರೀಸ್ಗಳಲ್ಲಿ ನಟಿಸಿ ಭಾರೀ ಮೆಚ್ಚುಗೆ ಪಡೆದಿದ್ದಾರೆ. ವಿಮಾರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಪಾತ್ರದಲ್ಲಿ ಅದ್ಭುತವಾಗಿ ನಟಿಸಿದ್ದಾರೆ ಸೌತ್ ನಟಿ.