NEWS

ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ; ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ರಾತ್ರಿ ದೇವೇಗೌಡರು ಆಸ್ಪತ್ರೆಗೆ ತೆರಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆಚ್.ಡಿ.ದೇವೇಗೌಡರು ಶೀತ ಮತ್ತು ಜ್ವರದಿಂದ ಬಳಲುತ್ತಿದ್ದಾರೆ.ಮಾಜಿ‌ ಪ್ರಧಾನಿಗಳಾದ ದೇವೇಗೌಡರ ಜತೆ ಮಾತನಾಡುತ್ತೇನೆ. ಜೊತೆಗೆ ಮಾಜಿ ಪ್ರಧಾನಿಗಳ ಕುಟುಂಬ ಮತ್ತು ಮಣಿಪಾಲ್ ವೈದ್ಯರ ಜೊತೆಗೆ ಮಾತನಾಡುತ್ತೇನೆ.

ಈ ವಯಸ್ಸಲ್ಲೂ ಅವರು ಆರೋಗ್ಯವಾಗಿದ್ದಾರೆ. ಕೋವಿಡ್ ಯಾರನ್ನೂ ಬಿಟ್ಟಿಲ್ಲ, ದೇವೇಗೌಡರಿಗೆ ಕೋವಿಡ್ ತೀವ್ರತೆ ಇರಲಿಕ್ಕಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೇವೇಗೌಡರ ಆರೋಗ್ಯ ಬಗ್ಗೆ ಹೆಚ್ಚಿನ ನಿಗಾ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಓಂ ಶ್ರೀ ಕಟೀಲು ದುರ್ಗ ಪರಮೇಶ್ವರಿ ಜ್ಯೋತಿಷ್ಯ ಪೀಠಂ ದೈವಜ್ಞ ಶ್ರೀ ಕೇಶವ ಕೃಷ್ಣಾ ಭಟ್ಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 8971498358.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 8971498358.

ನೆನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಹಿಂದೆ ಅಂದರೆ ಕೋರೋನ ಎರಡನೇ ಅಲೆಯಲ್ಲೂ ಕೂಡ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನಲೆ ಕೋವಿಡ್ ಪರೀಕ್ಷೆಯನ್ನು ಮಾಡಿಸಿದರು.

ಈ ವೇಳೆ ಕೊರೊನಾ ಸೋಂಕು ದೃಡಪಟ್ಟಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.ಜನವರಿ 15 ಕ್ಕೆ ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿಯವರಿಗೆ ಕೊರೊನಾ ಸೋಂಕು ತಗುಲಿತ್ತು. ನಂತರ ಅನಿತಾ ಅವರು

ತಮ್ಮ ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು. ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೂ ಕೂಡ ಕೊರೊನಾ ಸೋಂಕು ದೊಡ್ಡ ಪಟ್ಟಿತ್ತು. ಆದರೆ ಜನವರಿ 17ರಂದು ನಡೆಸಿದ ಪರೀಕ್ಷೆಯಲ್ಲಿ ಕೋರೋನ ನೆಗೆಟಿವ್ ಇತ್ತು. ಬೊಮ್ಮಾಯಿ

ಅವರಿಗೆ ಮಣಿಪಾ ಲ್ ಆಸ್ಪತ್ರೆಯಲ್ಲಿ ರಕ್ತದ ಒತ್ತಡ ಸುಗರ್ ರಕ್ತ ಹೆಪ್ಪು ಕಟ್ಟೋಕೆ ಸಂಬಂಧಪಟ್ಟಂತೆ ಹಲವು ತಪಾಸಣೆಗಳನ್ನ ನಡೆಸಲಾಯಿತು. ಶ್ವಾಸಕೋಶಗಳ ಎಕ್ಸರೆ ತೆಗೆಯಲಾಗಿತ್ತು. ಆದಷ್ಟು ಬೇಗ ದೇವೇಗೌಡರು ಗುಣಮುಖವಾಗಲಿ ಅನ್ನೋದು ನಮ್ಮ ಆಸೆ.

Related Articles

Leave a Reply

Your email address will not be published. Required fields are marked *

Back to top button